ಆಂತರಿಕ ಗುಣಮಟ್ಟ ಭರವಸೆ ಕೋಶ, ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಮತ್ತು ಅದ್ವಯ ಕನ್ನಡ ಸಂಘ ಜಂಟಿ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಅಕ್ಷಯ ಕಾಲೇಜು ಸಂಭಾಂಗಣದಲ್ಲಿ ಆಚರಿಸಲಾಯಿತು.

ಗಣ್ಯರು ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕನ್ನಡ ಭಾಷಾ ಪುಸ್ತಕಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆಗೊಂಡು ಬಳಿಕ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಾಹಿತಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಜಿಲ್ಲಾಧ್ಯಕ್ಷರಾದ ಶ್ರೀಮತಿ ವಿಂಧ್ಯಾ ಎಸ್ ರೈ ಕಡೇಶಿವಾಲಯ ಇವರು ಕನ್ನಡ ರಾಜ್ಯೋತ್ಸವ ಮಹತ್ವ ಕುರಿತಾಗಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಉಪಾಧ್ಯಕ್ಷರಾದ ಲಯನ್ ರವಿ ಪ್ರಸಾದ್ ಶೆಟ್ಟಿಇವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ವೇಳೆ ಅದ್ವಯ ಕನ್ನಡ ಸಂಘದ ಪದಾಧಿಕಾರಿಗಳ ಅರ್ಥಪೂರ್ಣ ಪದಸ್ವೀಕಾರ ಮಾಡಲಾಯಿತು. ಮತ್ತು ಪದವಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಪಕ್ಕಳ ಅಕ್ಷಯ ಕಾಲೇಜಿನಲ್ಲಿ ಕನ್ನಡದ ನಡೆಯ ಬೆಳವಣಿಗೆಯ ಕುರಿತಾಗಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾರತ್ನ ಮತ್ತು ಆಂತರಿಕ ಭರವಸೆ ಮತ್ತು ಗುಣಮಟ್ಟ ಕೋಶದ ನಿರ್ದೇಶಕಿ ಶ್ರೀಮತಿ ರಶ್ಮಿ, ಕನ್ನಡ ಉಪನ್ಯಾಸಕಿ ರಶ್ಮಿತಾ ಮತ್ತು ಅದ್ವಯ ಸಾಹಿತ್ಯ ಸಂಘದ ಅಧ್ಯಕ್ಷರಾದ ಶ್ರೀ ಸಂತೋಷ್ ಮತ್ತು ಲಯನ್ ಗಣೇಶ್ ಶೆಟ್ಟಿ, ಲಯನ್ ದಯಾನಂದ ರೈ ಕೊರ್ಮಂಡ ಉಪಸ್ಥಿರಿದ್ದರು.
ವಿದ್ಯಾರ್ಥಿಗಳು ಕನ್ನಡದ ತೇರು ಮತ್ತು ಹಚ್ಚೇವು ಕನ್ನಡದ ದೀಪ ಪದ್ಯವನ್ನು ಗಾಯನ ಮಾಡಿದರು. ಕನ್ನಡ ಉಪನ್ಯಾಸಕಿ ರಶ್ಮಿತಾ ಸ್ವಾಗತಿಸಿ, ಬಿ. ಹೆಚ್.ಎಸ್ ಉಪನ್ಯಾಸಕಿ ಕು. ಶೃತ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ನೇಹಾ ದ್ವಿತೀಯ ಬಿ. ಕಾಂ ವಂದಿಸಿ, ಹರಿಪ್ರಸಾದ್ ದ್ವಿತೀಯ ಬಿಎ ನಿರೂಪಿಸಿದರು.
