ಅಕ್ಷಯ ಕಾಲೇಜ್ ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ದಿನಾಚನೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಯಂತ ನಡುಬೈಲು, ಅಧ್ಯಕ್ಷರು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ, ಪುತ್ತೂರು ವಹಿಸಿದ್ದರು. ಇವರು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಹಕಾರ ಮತ್ತು ಸಮಾಜಮುಖಿ ದೃಷ್ಟಿಕೋನವನ್ನು ಬೆಳೆಸುತ್ತವೆ. ಇವರ ಸೇವಾ ಚಟುವಟಿಕೆಗಳು ಸಮಾಜದ ಬೆಳವಣಿಗೆಗೆ ಅಗತ್ಯ. ವಿದ್ಯಾರ್ಥಿಗಳು ತಂಡಬದ್ಧತೆಯೊಂದಿಗೆ ಕಾರ್ಯನಿರ್ವಹಿಸಬೇಕು. NSS ಚಟುವಟಿಕೆಗಳು ಅವರನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತವೆ ಎಂದರು.
ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಿಸಿದ ಢಾ. ಅರುಣ್ ಪ್ರಕಾಶ್, ಕಾರ್ಯಕ್ರಮಾಧಿಕಾರಿಗಳು , ರಾಷ್ಟ್ರೀಯ ಸೇವಾ ಯೋಜನೆ, ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಅಂಡ್ ಕಾಮರ್ಸ್, ಪುತ್ತೂರು, ಇವರು ಕಾರ್ಯಕ್ರಮ ಉದ್ಘಾಟಿಸಿ NSS ಕಾರ್ಯಕ್ರಮವು ಯುವಜನರಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಅತ್ಯುತ್ತಮ ವೇದಿಕೆ. ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಬೇಕು. ಇದು ತಂಡಬದ್ಧತೆಯನ್ನು, ಸಹಕಾರವನ್ನು ಮತ್ತು ಜೀವನ ಮೌಲ್ಯಗಳನ್ನು ಕಲಿಸುತ್ತದೆ. ಸಮುದಾಯದ ಬೆಳವಣಿಗೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ. NSS ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ. ಅಣ್ಣಪ್ಪ ಕೆ. ಎಂ. ಪ್ರಜ್ಞಾ ಆಶ್ರಮ ಬಿರುಮಲೆ, ಪುತ್ತೂರು. ಇವರು ಮಾತನಾಡಿ ವಿದ್ಯಾರ್ಥಿಗಳ ಸೇವಾ ಚಟುವಟಿಕೆಗಳು ಸಮುದಾಯಕ್ಕೆ ಸಕಾರಾತ್ಮಕ ಪರಿಣಾಮ ಬೀರುತ್ತವೆ. NSS ಚಟುವಟಿಕೆಗಳಲ್ಲಿ ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ. ಯುವಜನರು ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಈ ಕಾರ್ಯಗಳು ಅವರನ್ನು ಉತ್ತಮ ನಾಗರಿಕರಾಗಿ ರೂಪಿಸುತ್ತವೆ. ಸೇವಾಭಾವವು ಜೀವನದ ಮುಖ್ಯ ಅಂಶವಾಗಿದೆ.
ನಂತರ ಕಾಲೇಜಿನ ಪ್ರಾಂಶುಪಾಲರದ ಶ್ರೀ. ಸಂಪತ್ತ್ ಕೆ ಪಕ್ಕಲ ಮಾತನಾಡಿ ವಿದ್ಯಾರ್ಥಿಗಳು NSS ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು ಸೇವಾಭಾವವನ್ನು ಅರಿತುಕೊಳ್ಳುತ್ತಾರೆ. ಈ ಕಾರ್ಯಚಟುವಟಿಕೆಗಳು ಅವರಿಗೆ ಜೀವನ ಮೌಲ್ಯಗಳನ್ನು ಕಲಿಸುತ್ತವೆ. ಯುವಜನರಲ್ಲಿ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸುತ್ತವೆ. ಸಮುದಾಯಕ್ಕೆ ನೀಡುವ ಸೇವೆಯ ಮಹತ್ವವನ್ನು ತಿಳಿಸುತ್ತವೆ. NSS ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಹಾಯಕ ಎಂದರು.
ನಂತರ ಕಾಲೇಜಿನ ಪ್ರಾಂಶುಪಾಲರದ ಶ್ರೀ. ಸಂಪತ್ತ್ ಕೆ ಪಕ್ಕಲ ರಚಿಸಿದ ರಾಷ್ಟ್ರೀಯ ಸೇವಾ ಯೋಜನೆ ಕುರಿತಾದ ಸೇವಾಗೀತೆಯನ್ನು NSS ಸ್ವಯಂ ಸೇವಕಿಯರು ಹಾಡಿದರು.
ಅದೇ ರೀತಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನ ಸ್ವಯಂ ಸೇವಕರಿಗೆ ಮತ್ತು ಕಾಲೇಜಿನ ಸ್ವಯಂ ಸೇವಕರಿಗೆ ಆಯೋಜಿಸಲಾದ ಆನ್ಲೈನ್ ಮೂಲಕ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.
ವಿವಿಧ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಸ್ವಯಂ ಸೇವಕರು ಭಾಗವಹಿಸಿದ್ದರು. ಹಾಗೆಯೇ 2024- 25 ರ ಸಾಲಿನ ಅತ್ಯುತ್ತಮ ಸ್ವಯಂ ಸೇವಕ – ಸೇವಕಿ ಪ್ರಶಸ್ತಿಗೆ ಕೂ. ವಿಂದು ಶ್ರೀ, ತೃತೀಯ ಬಿಕಾಂ ಹಾಗೂ ಜ್ ಎಂ ಅಖಿಲೇಶ್ ಭಾಜನರಾದರು. ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ. ಅಣ್ಣಪ್ಪ ಕೆ. ಎಂ. ಇವರು ನೂತನ ರಾಷ್ಟ್ರೀಯ ಸೇವಾ ಯೋಜನ ಕಛೇರಿ ಉದ್ಘಾಟಿಸಿ ಶುಭಹಾರೈಸಿದರು. ಎಲ್ಲಾ ಅತಿಥಿಗಳು ಭಾರತ ಮಾತೆ ಮತ್ತು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಶ್ರೀ. ರಾಕೇಶ್ ಕೆ, ಕಾರ್ಯಕ್ರಮಾಧಿಕಾರಿಗಳು, ಘಟಕ-I ಪ್ರಸ್ತಾವಿಸಿದರು. ಹಾಗೆಯೇ ಕೂ. ಮೇಘಶ್ರೀ, ಕಾರ್ಯಕ್ರಮಾಧಿಕಾರಿಗಳು, ಘಟಕ-II ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನ ಘಟಕ ನಾಯಕ ನಾಯಕಿಯರು, ಸ್ವಯಂ ಸೇವಕಿಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ವಯಂ ಸೇವಕಿಯರು ಪ್ರಾರ್ಥಿಸಿ, ಕೂ. ಅಪೇಕ್ಷಾ ಜೆ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ನ್ಯೂಸ್ ಪುತ್ತೂರು :https://newsputtur.com/2025/09/10/teachers-day-celebration-and-guru-puraskar-at-akshaya-college/